ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ..

ಬಂಟ್ವಾಳ: ಯುವಕ ಮಂಡಲ (ರಿ ) ಪೆರಾಜೆ, ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಹಾಗೂ ಎನ್ಎಸ್ ಯು ಐ ಘಟಕ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪೆರಾಜೆ ಶಾಲಾ ರಂಗಮಂದಿರದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಜೆಗುತ್ತು ಶ್ರೀಕಾಂತ ಆಳ್ವಾ ರವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬುಡೋಳಿಗುತ್ತು ಚಂದ್ರಹಾಸ ಶೆಟ್ಟಿ ಬುಡೋಳಿ ಅಪ್ರಾಯ ಪೈ, ಶಾಂತಪ್ಪ ಕುಲಾಲ್, ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಮಂಜುಳ ಕುಶಾಲ ಪೆರಾಜೆ, ಸಂಜೀವ ಸಾಧಿಕುಕ್ಕು, ಮಾಜಿ ತಾಲೂಕು ಪಂಚಾಯತ್ ಸದಸ್ಯ ಶ್ರೀ ಕುಶಾಲ ಎಂ ಪೆರಾಜೆ, ಎನ್ಎಸ್ ಯು ಐ ಘಟಕ ಬಂಟ್ವಾಳ ಇದರ ಕಾರ್ಯಕರ್ತರಾದ ಫಾರೂಕ್ ಬಾಯಬ್ಬೆ ಮತ್ತು ಬಾತಿಶ್ ಅಳಕೆಮಜಲು ಇವರು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರದ ಅಂಗವಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾದ ಪೆರಾಜೆ ಗ್ರಾಮದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸಲಾಯಿತು ಹಾಗೂ ನವೋದಯ ಶಾಲೆಗೆ ಆಯ್ಕೆಗೊಂಡ ಚಿನ್ಮಯಿ ಮಂಜೋಟಿ ಅವರನ್ನು ಗುರುತಿಸಿ ಗೌರವಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷ ದೀಪಕ್ ಸುವರ್ಣ ಪೆರಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಸಚಿನ್ ಮಂಜೋಟಿ ವಂದನಾರ್ಪಣೆಗೈದರು. ಲಕ್ಷ್ಮೀಶ ಪೆರಾಜೆ ಕಾರ್ಯಕ್ರಮ ನಿರ್ವಹಿಸಿದರು.ಯುವಕ ಮಂಡಲ ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಬಳಗದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button