ಮೂಡುಬಿದಿರೆ – ಅಮೃತ ನಿರ್ಮಲ ನಗರೋತ್ಥಾನ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ…

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಅಮೃತ ನಿರ್ಮಲ ನಗರೋತ್ಥಾನ ಯೋಜನೆಯ 4 ಕೋಟಿ 46 ಲಕ್ಷ ಅನುದಾನ ಹಾಗೂ ಪುರಸಭಾ ಸಾಮಾನ್ಯ ನಿಧಿ 1 ಕೋಟಿ 36 ಲಕ್ಷ ಅನುದಾನದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರಿ ಪ್ರಸಾದ್ ಕುಮಾರ್ ವಹಿಸಿದರು.
ಈ ಸಂದರ್ಭದಲ್ಲಿ ಮೂಲ್ಕಿ ಮೂಡುಬಿದಿರೆಯ ಶಾಸಕರಾದ ಉಮಾನಾಥ ಕೋಟ್ಯಾನ್, ಉಪಾಧ್ಯಕ್ಷರಾದ ಶ್ರೀಮತಿ ಸುಜಾತಾ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ್ ಪೂಜಾರಿ,ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಮೇಘನಾಥ್ ಶೆಟ್ಟಿ, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ, ಮುಖ್ಯಾಧಿಕಾರಿ ಶ್ರೀಮತಿ ಇಂದು, ಗೌರವಾನ್ವಿತ ಪುರಸಭಾ ಸದಸ್ಯರು, ಕಾರ್ಯನಿರ್ವಾಹಕ ಅಭಿಯಂತರರಾದ ಪುರಂದರ ಕೋಟ್ಯಾನ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತೇಜಮೂರ್ತಿ, ಕಿರಿಯ ಅಭಿಯಂತರರಾದ ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button