ತುಂಬೆ ಡ್ಯಾಂ ಸಂತ್ರಸ್ತ ರೈತರ ನಿಯೋಗದಿಂದ ದ.ಕ ಜಿಲ್ಲಾಧಿಕಾರಿಗಳ ಭೇಟಿ…

ಬಂಟ್ವಾಳ: ಬಂಟ್ವಾಳ ತಾಲೂಕು ರೈತ ಸಂಘದ ಅಧ್ಯಕ್ಷ ಹಾಗೂ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಎಂ ಇಂದು ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ ಅವರನ್ನು ರೈತರ ನಿಯೋಗದೊಂದಿಗೆ ಭೇಟಿ ಮಾಡಿ ಮುಳುಗಡೆ ಪ್ರದೇಶದ ವರತೆ ಪ್ರದೇಶಕ್ಕೂ ಪರಿಹಾರ ನೀಡುವಂತೆ ಕ್ರಮಕೈಗೊಳ್ಳಲು ಲಿಖಿತವಾಗಿ ಮನವಿ ನೀಡಿದರು.
ಸಂತ್ರಸ್ತರ ಪಟ್ಟಿಯಲ್ಲಿ ಬಿಟ್ಟುಹೋದ ರೈತರಿಗೂ ಪರಿಹಾರ ಒದಗಿಸಲು ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಪರಿಹಾರಕ್ಕೆ ಬಾಕಿ ಇರುವ ರೈತರಿಗೂ ಕೂಡಲೇ ಪರಿಹಾರ ಒದಗಿಸುವಂತೆ ವಿನಂತಿಸಿದರು. ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

Sponsors

Related Articles

Leave a Reply

Your email address will not be published. Required fields are marked *

Back to top button