ಬುಧವಾರ – ದ.ಕ.ದಲ್ಲಿ 4 ಕೊರೊನಾ ಪಾಸಿಟಿವ್…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು (ಬುಧವಾರ) ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕಿತರ ಪೈಕಿ 29 ವರ್ಷದ ವ್ಯಕ್ತಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದಿಂದ ಬಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಇನ್ನೋರ್ವ 60 ವರ್ಷದ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದಾರೆ. ಅವರು ಕೂಡ ಸೌದಿ ಅರೇಬಿಯಾದಿಂದ ಮರಳಿದ್ದು, ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ.ಇನ್ನು 30 ಹಾಗೂ 40 ವರ್ಷದ ವ್ಯಕ್ತಿಗಳು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಅವರನ್ನು ಉಡುಪಿಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ದ.ಕ. ಜಿಲ್ಲೆಗೆ ಕಳುಹಿಸಲಾಗಿತ್ತು. ಅವರಲ್ಲಿ ಇದೀಗ ಸೋಂಕು ಪತ್ತೆಯಾಗಿದೆ.
ಇಂದು ಉಡುಪಿ ಜಿಲ್ಲೆಯಲ್ಲಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.
ರಾಜ್ಯದಲ್ಲಿ ಇಂದು 120 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಬೆಂಗಳೂರು ನಗರದಲ್ಲಿ 42, ಯಾದಗಿರಿಯಲ್ಲಿ 27, ವಿಜಯಪುರದಲ್ಲಿ 13, ಕಲಬುರಗಿಯಲ್ಲಿ 11, ಬೀದರ್ ನಲ್ಲಿ 5, ದಕ್ಷಿಣ ಕನ್ನಡ, ದಾರವಾಡದಲ್ಲಿ ತಲಾ 4, ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ತಲಾ 3, ಬಾಗಲಕೋಟೆ, ರಾಮನಗರದಲ್ಲಿ ತಲಾ 2, ಬೆಳಗಾವಿಯಲ್ಲಿ 1 ಪ್ರಕರಣಗಳು ವರದಿಯಾಗಿವೆ.

Sponsors

Related Articles

Leave a Reply

Your email address will not be published. Required fields are marked *

Back to top button