ಟಿ ಎಂ ಶಹೀದ್ ಅವರ 50 ನೇ ಹುಟ್ಟು ಹಬ್ಬದ ಪ್ರಯುಕ್ತ ಗೂನಡ್ಕ ಬಡ ಕುಟುಂಬಕ್ಕೆ ಮನೆ ನಿರ್ಮಾಣ…

ಸುಳ್ಯ:ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಆರಂತೋಡು ಇದರ ಸ್ಥಾಪಕಾಧ್ಯಕ್ಷಹಾಗು ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ರವರ 50 ನೇ ಹುಟ್ಟು ಹಬ್ಬದ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಹುಟ್ಟು ಹಬ್ಬ ಪ್ರಯುಕ್ತ 1 ವರ್ಷದ ಕಾರ್ಯಕ್ರಮದ ಅಂಗವಾಗಿ ಕೋರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ದರ್ಖಾಸ್ತು ಟಿ ಬಿ ಮುಹಮ್ಮದ್ ಕುಂಞಿ ಯವರ ಮಗಳು ಫಾತಿಮ ಅವರ ಕುಟುಂಬಕ್ಕೆ ರೂ. 6 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರ ಕಾಮಗಾರಿ ವೀಕ್ಷಣೆಗೆ ಟಿ.ಎಂ ಶಹೀದ್ ತೆಕ್ಕಿಲ್ ಭೇಟಿ ನೀಡಿ ಪರಿಶೀಲಿಸಿದರು. ನಿರ್ಮಾಣ ಹಂತದಲ್ಲಿರುವ ಮನೆಯ ಭೇಟಿ ಸಂದರ್ಭದಲ್ಲಿ ಆರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬ್ ಇಸಾಕ್ ಬಾಖವಿ, ಪೇರಡ್ಕ ಮುಹಿಯುದ್ದೀನ್ ಜುಮ ಮಸೀದಿ ಖತೀಬ್ ರಿಯಾಝ್ ಫೈಝಿ ಎಮ್ಮೆಮಾಡು, ನೂರುದ್ದೀನ್ ಅನ್ಸಾರಿ ಪೇರಡ್ಕ, ಸಾಜಿದ್ ಅಝ್ ಹರಿ ತೆಕ್ಕಿಲ್ ಪೇರಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಆರಂತೋಡು ಮಸೀದಿ ಅಧ್ಯಕ್ಷ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಪೇರಡ್ಕ ಮಸೀದಿ ಕಾರ್ಯದರ್ಶಿ ರಜಾಕ್ ಹಾಜಿ ತೆಕ್ಕಿಲ್ ಮೊಟ್ಟೆಂಗಾರ್, ಅನ್ವಾರುಲ್ ಹುದಾ ಎಸೊಸಿಯೇಷನ್ ಅಧ್ಯಕ್ಷ ಎಸ್ ಎಂ ಅಬ್ದುಲ್ ಮಜೀದ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ ಮತ್ತು ಎಸ್ ಕೆ ಹನೀಫ್ ಸಂಪಾಜೆ, ಕೆ ಎಂ ಮೂಸಾನ್ ಆರಂತೋಡು, ಹನೀಫ್ ಆರಂತೋಡು, ಮನ್ಸೂರ್ ಪಾರೆಕ್ಕಲ್, ಅನ್ವರ್ ಆರಂತೋಡು, ಲತೀಫ್ ತೆಕ್ಕಿಲ್ ಮೊಟ್ಟೆಂಗಾರ್, ಇಕ್ಬಾಲ್ ಚೆರೂರು, ಇಸಾಕ್ ಆರಂತೋಡು, ಪಸಿಲು ಆರಂತೋಡು, ಅಮೀರ್ ಕುಕ್ಕುಂಬಳ ಮೊದಲಾದವರು ಉಪಸ್ಥಿತರಿದ್ದರು.
ಸುವರ್ಣ ಸಂಭ್ರಮ ಪ್ರಯುಕ್ತ ಹತ್ತಾರು ಕಾರ್ಯಕ್ರಮ
ಟಿ.ಎಂ ಶಹೀದ್ ತೆಕ್ಕಿಲ್ ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಸುವರ್ಣ ಸಂಭ್ರಮ ಅಭಿನಂದನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಕೆ.ಟಿ.ವಿಶ್ವನಾಥ್ ನೇತೃತ್ವದಲ್ಲಿ ವರ್ಷ ಪೂರ್ತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಪರಿಸರ ಸ್ವಚ್ಚತೆ ಕಾರ್ಯಕ್ರಮ, ವಿವಿಧ ಧಾರ್ಮಿಕ ಕೇಂದ್ರಗಳಾದ ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ, ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಕಲ್ಲುಗುಂಡಿ ಮತ್ತು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನಕ್ಕೆ ಭೇಟಿ ನೀಡಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಸುಳ್ಯದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಕೊರೋನ ಲಾಕ್ ಡೌನ್ ಸಂದಭದಲ್ಲಿ ಹಲವಾರು ಮಂದಿಗೆ ಮದುವೆಗೆ, ಚಿಕಿತ್ಸೆಗೆ ಮತ್ತು ಆಹಾರ ಸಮಾಗ್ರಿಗಳ ಕಿಟ್ ವಿತರಿಸಲಾಗಿದೆ.

Sponsors

Related Articles

Back to top button